ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

Update: 2019-12-17 12:38 GMT

ಬೆಂಗಳೂರು, ಡಿ.17: ಕೆಲಸ ಮುಗಿಸಿಕೊಂಡು ಮನೆಗೆ ಬೈಕ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಸವಾರ ಆಯತಪ್ಪಿಬಿದ್ದು ಸಾವನ್ನಪ್ಪಿರುವ ಘಟನೆ ಇಲ್ಲಿನ ಕೆಆರ್‌ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೆಆರ್‌ಪುರಂನ ಮೇಲು ಸೇತುವೆ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಉದಯ ನಗರದ ಪರಶುರಾಮ(30) ಸಾವನ್ನಪ್ಪಿರುವ ಬೈಕ್ ಸವಾರ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ಮೂಲದ ಪರಶುರಾಮ, ಕೆಆರ್‌ಪುರಂ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿಕೊಂಡು ಸೋಮವಾರ ತಡರಾತ್ರಿ ವೇಳೆ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಕೆಆರ್‌ಪುರಂ ಮೇಲು ಸೇತುವೆ ರಸ್ತೆಯಲ್ಲಿ ಆಯತಪ್ಪಿಬಿದ್ದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News