ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಸಂಸದ ವಿ.ಶ್ರೀನಿವಾಸಪ್ರಸಾದ್

Update: 2019-12-17 16:42 GMT

ಮೈಸೂರು,ಡಿ.17: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚಾಮರಾಜನಗರ ಕ್ಷೇತ್ರ ಸಂಸದ ವಿ.ಶ್ರೀನಿವಾಸಪ್ರಸಾದ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇತ್ತೀಚೆಗಷ್ಟೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಮಂಗಳವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಮಾತುಕತೆ ನಡೆಸಿದರು.

ರಾಜಕೀಯ ವೈರಿಗಳಾಗಿದ್ದ ಉಭಯ ನಾಯಕರ ಬೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ತೆಗೆದು ಹಾಕಿದ್ದರು. ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಿ ನಂಜನಗೂಡಿನಲ್ಲಿ ಉಪಚುನಾವಣೆಯನ್ನು ಎದುರಿಸಿ ಶ್ರೀನಿವಾಸಪ್ರಸಾದ್ ಸೋಲನ್ನು ಕಂಡಿದ್ದರು. ನಂತರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸಂಸದರಾಗಿ ಆಯ್ಕೆಯಾಗಿದ್ದರು.

ಈ ಇಬ್ಬರೂ ರಾಜಕೀಯ ವೈರಿಗಳಾಗಿದ್ದರು. ಇಂದು ಸಿದ್ದರಮಯ್ಯ ಅವರ ಅರೋಗ್ಯವನ್ನು ಶ್ರೀನಿವಾಸ ಪ್ರಸಾದ್ ವಿಚಾರಿಸಿದ್ದಾರೆ. ರಾಜಕೀಯದಲ್ಲಿ ಯಾರೂ ವೈರಿಗಳಲ್ಲ, ಶತ್ರುಗಳೂ ಅಲ್ಲ ಎಂಬುದನ್ನು ಈ ಇಬ್ಬರು ನಾಯಕರು ದೃಢಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News