ಕನ್ನಡಿಗರನ್ನು ಶೋಷಿಸುವುದು ಬಿಜೆಪಿ ಚಾಳಿ: ಎಚ್.ಡಿ.ಕುಮಾರಸ್ವಾಮಿ

Update: 2019-12-18 14:32 GMT

ಬೆಂಗಳೂರು, ಡಿ.18: ಕನ್ನಡಿಗರನ್ನು ರಾಜಕೀಯಕ್ಕೆ ದುಡಿಸಿಕೊಳ್ಳುವುದು, ಯೋಜನೆ, ಕಾರ್ಯಕ್ರಮ, ಅನುದಾನಗಳ ವಿಷಯದಲ್ಲಿ ಶೋಷಿಸುವುದು ಬಿಜೆಪಿಯ ಚಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರಕಾರ ತಡೆ ನೀಡಿರುವುದನ್ನು ಕನ್ನಡಿಗರಾಗಿ ಟೀಕಿಸಬೇಕೋ? ಬೆಂಬಲಿಸಬೇಕೋ? ಕನ್ನಡಿಗರ ಆತ್ಮಾಭಿಮಾನ ಕೆಣಕುವುದರಲ್ಲಿ ನಿಮಗೆಂಥ ಸಂತೋಷ ಎಂದು ಅವರು ಪ್ರಶ್ನಿಸಿದ್ದಾರೆ.

ಚುನಾವಣೆ ವೇಳೆ ಮಹಾದಾಯಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ವೋಟು ಹಾಕಿಸಿಕೊಂಡ ರಾಜ್ಯದ ಬಿಜೆಪಿ ನಾಯಕರು ಇದೀಗ ಮೋದಿಗೆ ಬೆದರಿ ತಮ್ಮ ಧ್ವನಿಯನ್ನೇ ಕಳೆದುಕೊಂಡಿದ್ದಾರೆ. ಕನ್ನಡಿಗರನ್ನು ದಾಸ್ಯಕ್ಕೆ ಈಡು ಮಾಡುವ ದಲ್ಲಾಳಿಗಳಾಗಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಗಾರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News