ಪುತ್ತೂರು: ನೇಣು ಬಿಗಿದು ವೃದ್ಧ ಆತ್ಮಹತ್ಯೆ

Update: 2019-12-18 18:40 GMT

ಪುತ್ತೂರು: ವೃದ್ಧರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾದ ಮಠಂತಬೆಟ್ಟು ದಾಸಕೋಡಿ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. 

ಮಠಂತಬೆಟ್ಟು ದಾಸಕೋಡಿ ನಿವಾಸಿ ನಾರಾಯಣ ನಾಯ್ಕ(75) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಕಳೆದ ಹಲವು ವರ್ಷಗಳಿಂದ ಅಪಸ್ಮಾರ ಕಾಯಿಲೆ ಮತ್ತು ಮಾನಸಿಕ ಖಿನ್ನತೆಯಿಂದ ಬಳಸುತ್ತಿದ್ದರು ಎನ್ನಲಾಗಿದ್ದು, ಇದಕ್ಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. 

ಬುಧವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಪಕ್ಕದ ಮರದ ಕೊಂಬೆಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News