ಮಂಗಳೂರಿನಲ್ಲಿ ಗೋಲಿಬಾರ್ ಗೆ ಇಬ್ಬರು ಬಲಿ ಖಂಡಿಸಿ ಗಂಗೊಳ್ಳಿಯಲ್ಲಿ ಸ್ವಯಂಪ್ರೇರಿತ ಬಂದ್

Update: 2019-12-20 04:58 GMT

ಗಂಗೊಳ್ಳಿ : ಮಂಗಳೂರಿನಲ್ಲಿ ಗುರುವಾರ ನಡೆದ ಗೋಲಿಬಾರ್ ನಿಂದ ಇಬ್ಬರು ಮೃತಪಟ್ಟಿರುವುದನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಕೋರಿ ಗಂಗೊಳ್ಳಿಯಲ್ಲಿ ಮುಸ್ಲಿಮರು ತಮ್ಮ ವ್ಯವಹಾರಗಳನ್ನು ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸಿ ಬಂದ್ ಆಚರಿಸಿದ್ದಾರೆ.

ಇಡೀ ಗಂಗೊಳ್ಳಿಯಲ್ಲಿ ಬೆಳಗ್ಗೆಯಿಂದಲೇ ಕಾರು ರಿಕ್ಷಾ ರಸ್ತೆಗೆ ಇಳಿಯದೇ ಹಾಗೂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಗೋಲಿಬಾರ್ ಘಟನೆಯನ್ನು ಖಂಡಿಸಲಾಯಿತು. ಇಂದು ಸಂಜೆ ವರೆಗೂ ಈ ಬಂದ್ ಮುಂದುವರೆಯಲಿದೆ ಎಂದು ತಿಳಿದುಬಂದಿದೆ. 

ಜಿಲ್ಲೆಯಾದ್ಯಂತ ವಿಧಿಸಲಾಗಿರುವ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವಾದ ಗಂಗೊಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ.

ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದಾಗಿಯೂ ಹಾಗೂ ಪ್ರಚೋದನೆಗೆ ಒಳಗಾಗಬಾರದಾಗಿಯೂ, ಎಲ್ಲರೂ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಹೋಗಬೇಕಾಗಿಯೂ ಗಂಗೊಳ್ಳಿ ಜಮಾತುಲ್ ಮುಸ್ಲಿಮೇನ್ ವಿನಂತಿಸಿ ಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News