ಗೋಲಿಬಾರ್ ಗೆ ಬಲಿಯಾದವರ ಕುಟುಂಬದ ಭೇಟಿಗೆ ಆಗಮಿಸಿದ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

Update: 2019-12-20 11:17 GMT

ಮಂಗಳೂರು: ನಗರದಲ್ಲಿ ಗುರುವಾರ ನಡೆದ ಪ್ರತಿಭಟನೆ ಸಂದರ್ಭ ಪೊಲೀಸ್ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಸ್ಥರನ್ನು ಭೇಟಿಯಾಗಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಬೆಂಗಳೂರಿನಿಂದ ಆಗಮಿಸಿದ ಕಾಂಗ್ರೆಸ್ ನಿಯೋಗವನ್ನು ತಡೆಯಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನ ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ರಮೇಶ್ ಕುಮಾರ್, ಎಂಬಿ ಪಾಟೀಲ್, ಎಸ್ ಆರ್ ಪಾಟೀಲ್, ಬಸವರಾಜ್ ರಾಯರೆಡ್ಡಿ, ಉಗ್ರಪ್ಪ, ನಝೀರ್ ಅಹ್ಮದ್ ಅವರನ್ನು ನೋಟಿಸ್ ನೀಡಿ ವಶಕ್ಕೆ ಪಡೆಯಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News