ತೊಕ್ಕೊಟ್ಟು : ಯುವಕನಿಗೆ ಚೂರಿ ಇರಿತ

Update: 2019-12-21 17:17 GMT

ತೊಕ್ಕೊಟ್ಟು : ಇಲ್ಲಿಗೆ ಸಮೀಪದ ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಶನಿವಾರ ರಾತ್ರಿ ವೇಳೆ ವರದಿಯಾಗಿದೆ.

ಚೂರಿ ಇರಿತಕ್ಕೆ ಒಳಗಾದ ಯುವಕ ಸ್ಥಳೀಯ ನಿವಾಸಿ ಎಂದು ತಿಳಿದುಬಂದಿದ್ದು, ಆತನನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಚೂರಿಯಿಂದ ಇರಿದಿದ್ದಾಗಿ ಹೇಳಲಾಗುತ್ತಿದ್ದು, ಉಳ್ಳಾಲ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News