ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು
Update: 2019-12-23 22:00 IST
ಉಡುಪಿ, ಡಿ.23: ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆ ಮುಂಭಾಗ ನಾಯರ್ಕೆರೆ ಎಂಬಲ್ಲಿ ಡಿ.20ರಂದು ರಾತ್ರಿ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಬ್ಲೆಷ್ಟನ್ ಜೂಜೆಪೌಲ್ ಪೆರ್ನಾಂಡೀಸ್ ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಇವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಡಿ.21ರಂದು ಮಧ್ಯಾಹ್ನ ವೇಳೆ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.