ಪ್ರೆಸ್‌ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಾ.ವೀರೇಂದ್ರ ಹೆಗ್ಗಡೆ ಆಯ್ಕೆ

Update: 2019-12-24 12:09 GMT

ಬೆಂಗಳೂರು, ಡಿ.24: ಪ್ರತಿಷ್ಠಿತ ಬೆಂಗಳೂರು ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ ವೇಳೆ ಯುಗದ ಸಾಧಕ ಪ್ರಶಸ್ತಿಗೆ ಪ್ರೊ.ಜಿ.ವೆಂಕಟಸುಬ್ಬಯ್ಯರನ್ನು ಆರಿಸಲಾಗಿದೆ. ಅಲ್ಲದೆ, 2019ನೇ ಸಾಲಿನ ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿಗಳಿಗೆ ಎಂ.ಸಿದ್ದರಾಜು, ಕೆ.ಸುನಿಲ್ ಪ್ರಸಾದ್, ಕೆ.ಎಚ್.ಸಾವಿತ್ರಿ, ಬಿ.ವಿ.ನಾಗರಾಜು, ರವೀಂದ್ರ ಜಿ. ಭಟ್, ಕೆ.ಎನ್. ಚೆನ್ನೇಗೌಡ, ಬಿ.ಹರಿಶ್ಚಂದ್ರ ಭಟ್, ಎಂ.ಅಬ್ದುಲ್ ಹಮೀದ್ (ಪಾಳ್ಯ), ಇಮ್ರಾನ್ ಖುರೇಶಿ, ಜಿ.ಕೆ.ಸತ್ಯ, ಲಕ್ಷ್ಮಣ ಕೊಡಸೆ, ಜೋಸೆಫ್ ಹೂವರ್, ಎನ್.ಎಸ್.ಶಂಕರ್, ಬಿ.ಕೆ. ರವಿ, ರು. ಬಸಪ್ಪ ಹಾಗೂ ಜಯಪ್ರಕಾಶ್ ಶೆಟ್ಟಿಯನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಡಿ.31 ರಂದು ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹಾಗೂ ಲಕ್ಷ್ಮಣ ಸವದಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News