ಆಯ್ದ ವಿಡಿಯೊಗಳನ್ನು ಸೋರಿಕೆ ಮಾಡಿ ಪೊಲೀಸರು ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು, ಡಿ.24: 'ಮಂಗಳೂರು ಗಲಭೆಯ ತಪ್ಪಿತಸ್ಥರು ಯಾರೇ ಇರಲಿ, ತನಿಖೆ ನಡೆಸಿ ಅವರನ್ನು ಶಿಕ್ಷೆಗೊಳಪಡಿಸಬೇಕು. ಆದರೆ ಆಯ್ದ ವಿಡಿಯೋಗಳನ್ನು ಲೀಕ್ ಮಾಡಿ ಅದರ ಮೂಲಕ ಒಂದು ಧರ್ಮದ ಜನರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಸಲ್ಲದು. ಶಾಂತಿ -ಸೌಹಾರ್ದ ಕಾಪಾಡಬೇಕಾಗಿರುವ ಪೊಲೀಸರೇ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತಿರುವುದು ಸರಿ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ, ತನಿಖೆಯ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮಲ್ಲಿರುವ ಸಾಕ್ಷ್ಯಗಳನ್ನು ಮೊದಲು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕಿತ್ತು. ಈ ಕಾರಣಕ್ಕಾಗಿಯೇ ಸಿಐಡಿ ತನಿಖೆ ಒಂದು ನಾಟಕ, ಅದರ ಬದಲಿಗೆ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯಿಸಿದ್ದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳೂರು ಗಲಭೆಯ ತಪ್ಪಿತಸ್ಥರು ಯಾರೇ ಇರಲಿ, ತನಿಖೆ ನಡೆಸಿ ಅವರನ್ನು ಶಿಕ್ಷೆಗೊಳಪಡಿಸಬೇಕು.
— Siddaramaiah (@siddaramaiah) December 24, 2019
ಆದರೆ ಆಯ್ದ ವಿಡಿಯೋಗಳನ್ನು ಲೀಕ್ ಮಾಡಿ ಅದರ ಮೂಲಕ ಒಂದು ಧರ್ಮದ ಜನರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಸಲ್ಲದು.
ಶಾಂತಿ -ಸೌಹಾರ್ದತೆ ಕಾಪಾಡಬೇಕಾಗಿರುವ ಪೊಲೀಸರೇ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತಿರುವುದು ಸರಿ ಅಲ್ಲ.
2/2
ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ,
— Siddaramaiah (@siddaramaiah) December 24, 2019
ತನಿಖೆಯ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ.
ತಮ್ಮಲ್ಲಿರುವ ಸಾಕ್ಷ್ಯಗಳನ್ನು ಮೊದಲು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕಿತ್ತು.
ಈ ಕಾರಣಕ್ಕಾಗಿಯೇ ಸಿಐಡಿ ತನಿಖೆ ಒಂದು ನಾಟಕ,
ಅದರ ಬದಲಿಗೆ
ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯಿಸಿದ್ದು.
1/2