ಮನೆಗೆ ನುಗ್ಗಿ ಅಡುಗೆ ಭಟ್ಟನ ಇರಿದು ಕೊಲೆ

Update: 2019-12-24 18:25 GMT

ಮಂಡ್ಯ, ಡಿ.24: ವಿವಾಹೇತರ ಸಂಬಂಧದ ಶಂಕೆ ಹಿನ್ನೆಲೆ ಅಡುಗೆ ಭಟ್ಟನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮೊಗರಳ್ಳಿ ಮಂಟಿ ಗ್ರಾಮದಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುರ ಗ್ರಾಮದ ಉದಯ್(39) ಕೊಲೆಗೀಡಾಗಿರುವ ಅಡುಗೆ ಭಟ್ಟ. ಮನೆಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಉದಯ್‍ ರನ್ನು ಬರ್ಬರವಾಗಿ ಇರಿದು ಪರಾರಿಯಾದರು ಎನ್ನಲಾಗಿದೆ. ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಉದಯ್ ಅಡುಗೆ ಭಟ್ಟನ ಕೆಲಸ ಮಾಡಿಕೊಂಡು ಶ್ರೀರಂಗಪಟ್ಟಣದಲ್ಲಿ ವಾಸವಿದ್ದರು ಎನ್ನಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News