ದುಬೈ: ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತ್ಯು

Update: 2019-12-25 17:10 GMT

ದುಬೈ, ಡಿ. 25: ದುಬೈಯಲ್ಲಿ ಬುಧವಾರ ಮುಂಜಾನೆ ನಡೆದ ರಸ್ತೆ ಅಪಘಾತವೊಂದರಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಮೃತರು 19 ವರ್ಷದ ರೋಹಿತ್ ಕೃಷ್ಣಕುಮಾರ್ ಮತ್ತು 21 ವರ್ಷದ ಶರತ್ ಕುಮಾರ್. ಅವರಿಬ್ಬರೂ ಕೇರಳದವರು.

ಕ್ರಿಸ್ಮಸ್ ಸ್ನೇಹ ಕೂಟ ಮುಗಿಸಿ ವಾಪಸಾಗುತ್ತಿದ್ದಾಗ ನಡೆದ ರಸ್ತೆ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ‘ಖಲೀಜ್ ಟೈಮ್ಸ್’ ವರದಿ ಮಾಡಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೃಷ್ಣಕುಮಾರ್ ಬ್ರಿಟನ್‌ ನಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದರೆ, ಶರತ್ ಕುಮಾರ್ ಅಮೆರಿಕದ ವಿಶ್ವವಿದ್ಯಾಲಯವೊಂದರಲ್ಲಿ ಅಧ್ಯಯನ ಮಾಡುತ್ತಿದ್ದಾರೆ ಎಂದು ಪತ್ರಿಕೆ ಹೇಳಿದೆ.

ಅವರು ಕ್ರಿಸ್ಮಸ್ ರಜೆಯನ್ನು ತಮ್ಮ ಕುಟುಂಬ ಸದಸ್ಯರೊಂದಿಗೆ ದುಬೈಯಲ್ಲಿ ಕಳೆಯುತ್ತಿದ್ದರು.

ಅವರಿಬ್ಬರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ದುಬೈಯ ಡೆಲ್ಲಿ ಪ್ರೈವೇಟ್ ಸ್ಕೂಲ್‌ನಲ್ಲಿ ಪಡೆದಿದ್ದರು ಎಂದು ‘ಗಲ್ಫ್ ನ್ಯೂಸ್’ ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News