ತೇಜಸ್ವಿ ಸೂರ್ಯ ಟ್ವೀಟ್‌: ತಪ್ಪಾಗಿ ಅರ್ಥೈಸಿಕೊಂಡಿದ್ದ ವ್ಯಕ್ತಿಗೆ ಐಶ್ವರ್ಯ ಅನಂತಕುಮಾರ್ ತಿರುಗೇಟು

Update: 2019-12-25 17:21 GMT

ಬೆಂಗಳೂರು, ಡಿ.25: ಎದೆ ಸೀಳಿದರೆ ಒಂದಕ್ಷರ ಇಲ್ಲದವರು, ಪಂಕ್ಚರ್ ಹಾಕುವವರಿಂದ ಗಲಭೆಗಳು ನಡೆಯುತ್ತಿವೆ, ಎಂಬ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆಯನ್ನು ಟ್ವಿಟ್ಟರ್‌ನಲ್ಲಿ ತೇಜಸ್ವಿನಿ ಅನಂತಕುಮಾರ್ ಎಂದು ತಪ್ಪಾಗಿ ಅರ್ಥೈಸಿಕೊಂಡಿದ್ದ ವ್ಯಕ್ತಿಗೆ ದಿವಂಗತ, ಕೇಂದ್ರದ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಮಗಳು ಐಶ್ವರ್ಯ ಅನಂತಕುಮಾರ್ ಟ್ವಿಟ್ ಮಾಡಿ ತಿಳಿವಳಿಕೆ ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ವ್ಯಕ್ತಿಯೊಬ್ಬ ಟ್ವಿಟ್ಟರ್‌ನಲ್ಲಿ ತೇಜಸ್ವಿ ಸೂರ್ಯ ಬದಲಿಗೆ ತೇಜಸ್ವಿನಿ ಅನಂತಕುಮಾರ್ ಎಂದು ತಪ್ಪಾಗಿ ಅರ್ಥೈಸಿಕೊಂಡು ಅವಾಚ್ಯವಾಗಿ ಟ್ವೀಟ್ ಮಾಡಿದ್ದರು. ಈ ವೇಳೆ ಮಧ್ಯಪ್ರವೇಶಿಸಿ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅನಂತಕುಮಾರ್ ಮಗಳು ಐಶ್ವರ್ಯ ಅನಂತಕುಮಾರ್, ನೀವು ತಪ್ಪಾಗಿ ಅರ್ಥೈಸಿಕೊಂಡಿದ್ದೀರಿ. ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ತೇಜ್ವಸಿ ಸೂರ್ಯ ಹೊರತು ತೇಜಸ್ವಿನಿ ಅನಂತಕುಮಾರ್ ಅವರಲ್ಲ. ತೇಜಸ್ವಿನಿ ಅನಂತಕುಮಾರ್ ಅದಮ್ಯ ಚೇತನ ಸಂಸ್ಥೆ ಮೂಲಕ ಸಾವಿರಾರು ಸರಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಕೆ ಮಾಡುತ್ತಾರೆ. ಬಡವರ ನೋವಿನ ಬಗ್ಗೆ ತೇಜಸ್ವಿನಿ ಅನಂತಕುಮಾರ್‌ಗೆ ಗೊತ್ತಿದೆ, ಎಂದೂ ತೇಜಸ್ವಿನಿ ಅನಂತಕುಮಾರ್ ಅವರು ಈ ರೀತಿಯ ಹೇಳಿಕೆ ನೀಡುವುದಿಲ್ಲ ಎಂದು ತಿರುಗೇಟು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News