ಸಾಲಬಾಧೆ: ರೈತ ಆತ್ಮಹತ್ಯೆ

Update: 2019-12-26 14:42 GMT

ಕಲಬುರಗಿ, ಡಿ.26: ಜೇವರ್ಗಿ ತಾಲೂಕಿನ ರೇವನೂರ ಗ್ರಾಮದ ರೈತ ಕಡ್ಲೆಪ್ಪ ತನ್ನ ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೃತ ರೈತ ಬ್ಯಾಂಕಿನಲ್ಲಿ ಮತ್ತು ಖಾಸಗಿ ಲೇವಾದೇವಿದಾರರಲ್ಲಿ 8 ಲಕ್ಷ ರೂ.ಸಾಲ ಮಾಡಿದ್ದು, ತೀರಿಸಲಾಗದೆ ವಿಷ ಸೇವಿಸಿ ಸಾವನ್ನಪ್ಪಿದ್ದಾನೆಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇವರಿಗೆ ಮೂರು ಹೆಣ್ಣು, ಇಬ್ಬರು ಗಂಡು ಮಕ್ಕಳಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News