ಸುಳ್ಯ : ದಲಿತ ಯುವಕ ಸಹಿತ ಇಬ್ಬರಿಗೆ ತಂಡದಿಂದ ಹಲ್ಲೆ, ಕೊಲೆ ಬೆದರಿಕೆ

Update: 2019-12-27 17:38 GMT

ಸುಳ್ಯ:  ದಲಿತ ಯುವಕ ಸಹಿತ ಇಬ್ಬರ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆಗೈದು, ಕೊಲೆ ಬೆದರಿಕೆ ಒಡ್ಡಿದ್ದಲ್ಲದೆ ಅದನ್ನು ವೀಡಿಯೊ ಚಿತ್ರೀಕರಿಸಿದ ಘಟನೆ ಸುಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆ, ಕೊಲೆ ಬೆದರಿಕೆ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸುಳ್ಯ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಘಟನೆಯ ವಿವರ

ಸುಳ್ಯ ಕುಕ್ಕಾಜೆ ಕಾನ ನಿವಾಸಿ, ರಿಕ್ಷಾ ಚಾಲಕ ಪುರುಷೋತ್ತಮ ಮತ್ತು ಮತ್ತೋರ್ವರ ಯುವಕನ ಮೇಲೆ ಹಲ್ಲೆ ನಡೆದಿದ್ದು ರಾಜ್, ಮುಖೇಶ್ ಮತ್ತಿತರರ ತಂಡ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಪುರುಷೋತ್ತಮ ನನ್ನು ವಿಚಾರಣೆ ನಡೆಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News