ಮಂಜೇಶ್ವರ: ಡಿವೈಎಫ್ಐ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು
Update: 2019-12-30 05:16 GMT
ಮಂಜೇಶ್ವರ: ತಂಡವೊಂದು ಡಿವೈಎಫ್ಐ ಕಾರ್ಯಕರ್ತರ ಮೇಲೆ ಹಲ್ಲೆಗೈದ ಘಟನೆ ರವಿವಾರ ರಾತ್ರಿ ವರದಿಯಾಗಿದೆ.
ಹಲ್ಲೆಗೊಳಗಾದವರನ್ನು ಪಾವೂರಿನ ಇಮ್ತಿಯಾಝ್, ಕಲಂದರ್, ಇರ್ಫಾನ್ ಎಂದು ಗುರುತಿಸಲಾಗಿದೆ. ಇವರನ್ನು ಕುಂಬಳೆಯ ಸಹಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಸರು ಕೇಳಿ 15ರಷ್ಟು ಮಂದಿಯ ತಂಡ ದೊಣ್ಣೆ ಹಾಗೂ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರು ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರೆಂದು ಗಾಯಾಳುಗಳು ಆರೋಪಿಸಿದ್ದಾರೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.