ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

Update: 2019-12-30 16:37 GMT

ಮಲ್ಪೆ, ಡಿ.30: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರ ರೊಬ್ಬರು ಅಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಡಿ.28ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಕುಪ್ಪಯ್ಯ ಖಾರ್ವಿ(43) ಎಂದು ಗುರುತಿಸಲಾಗಿದೆ. ಇವರು ಇತರ ಮೀನುಗಾರರೊಂದಿಗೆ ಕಲಾವತಿ ಕಾಂಚನ್ ಎಂಬವರ ಶ್ರೀಸ್ವರ್ಣ ಹನುಮ ಹೆಸರಿನ ಮೀನುಗಾರಿಕಾ ಬೋಟಿನಲ್ಲಿ ಡಿ.15ರಂದು ಮಲ್ಪೆ ಬಂದರಿ ನಿಂದ ಸಮುದ್ರಕ್ಕೆ ತೆರಳಿದ್ದು ಡಿ.24ರಂದು ಮಲ್ಪೆಯಿಂದ ಸುಮಾರು 65-70 ನಾಟಿಕಲ್ ದೂರ ಸಮುದ್ರದಲ್ಲಿ ಬಲೆಯನ್ನು ಬಿಡುತ್ತಿದ್ದ ಕುಪ್ಪಯ್ಯ ಖಾರ್ವಿ ಆಕಸ್ಮಿಕವಾಗಿ ನೀರಿಗೆ ಬಿದ್ದರೆನ್ನಲಾಗಿದೆ.

ಕೂಡಲೇ ಅವರನ್ನು ಮೇಲಕ್ಕೆ ಎತ್ತಿ ಉಪಚರಿಸಿದ್ದು, ಗಂಭೀರವಾಗಿ ಅಸ್ವಸ್ಥ ಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾ ಗಿತ್ತು. ನಂತರ ವೈದ್ಯರ ಸಲಹೆಯಂತೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಯಾಗದೆ ಡಿ.28ರಂದು ರಾತ್ರಿ ಮೃತಪಟ್ಟರು. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News