ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-12-30 16:39 GMT

ಕೋಟ, ಡಿ.30: ವಿಪರೀತ ಕುಡಿತದ ಚಟ ಹೊಂದಿದ್ದ ಹಳ್ಳಾಡಿ ಹರ್ಕಾಡಿ ಗ್ರಾಮದ ಹರ್ಕಾಡಿ ನಿವಾಸಿ ರಾಘವೇಂದ್ರ ಆಚಾರ್ಯ (41) ಎಂಬವರು ಮನೆಯ ಮಧ್ಯ ಕೋಣೆಯಲ್ಲಿರುವ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಡಿ.29ರಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕಾರ್ಕಳ ಕಾಬೆಟ್ಟು ಕಟ್ಟೆಮಾರ್ ನಿವಾಸಿ ಲಾರೆನ್ಸ್ ಡಿಸೋಜ(52) ಎಂಬವರು ಡಿ.28ರಂದು ರಾತ್ರಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News