​ಜ.2ರ ಧರಣಿಗೆ ವಿವಿಧ ಸಂಘಟನೆಗಳ ಬೆಂಬಲ

Update: 2020-01-01 17:40 GMT

ಮಂಗಳೂರು, ಜ.1: ಮಂಗಳೂರಿನಲ್ಲಿ ಡಿ.19ರಂದು ನಡೆದ ಗೋಲಿಬಾರ್-ಹಿಂಸಾಚಾರದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜ.2ರಂದು ನಗರದ ಪುರಭವನದ ಮುಂದೆ ಸಮಾನ ಮನಸ್ಕ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳು ನಡೆಸುವ ಧರಣಿಗೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಾಜಿ ಮೇಯರ್ ಹಾಗೂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜೆಡಿಎಸ್ ಉಳ್ಳಾಲ ನಗರ
ಜ.2ರಂದು ನಗರದ ಪುರಭವನದ ಮುಂದಿರುವ ಅಂಬೇಡ್ಕರ್ ಸ್ಮಾರಕ ಬಳಿ ಜಾತ್ಯತೀತ ಪಕ್ಷಗಳ ಮತ್ತು ಸಂಘಟನೆಗಳ ನೇತೃತ್ವದಲ್ಲಿ ನಡೆಯುವ ಧರಣಿಗೆ ಜೆಡಿಎಸ್ ಉಳ್ಳಾಲ ನಗರ ಸಮಿತಿಯ ಅಧ್ಯಕ್ಷ ಪುತ್ತುಮೋನು ಹುಸೈನ್ ಬೆಂಬಲ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News