ತಲೆ ಬೋಳಿಸಿ ಕೇಂದ್ರ ಸರಕಾರದ ವಿರುದ್ಧ ರೈತರ ಪ್ರತಿಭಟನೆ

Update: 2020-01-02 16:07 GMT

ಬೆಂಗಳೂರು, ಜ.2: ಕೇಂದ್ರ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ರತ್ನ ಭಾರತ ರೈತ ಸಮಾಜದ ಕಾರ್ಯಕರ್ತರು ತಲೆ ಬೋಳಿಸಿಕೊಳ್ಳುವ ಮೂಲಕ ನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಕೆ.ಆರ್.ಪುರನಲ್ಲಿ ತಲೆಬೋಳಿಸಿಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿದ ರೈತ ಕಾರ್ಯಕರ್ತರು, ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಪ್ರಧಾನಿ ನರೇಂದ್ರ ಮೋದಿ ಕೇವಲ ಮಾತಿನಲ್ಲಿ ಮಾತ್ರ ಮನೆ ಕಟ್ಟುತ್ತಾರೆಯೇ ವಿನಃ ಒಂದು ಯೋಜನೆಯೂ ಕಾರ್ಯರೂಪಕ್ಕೆ ಬಂದು ಜನತೆಗೆ ಉಪಯೋಗವಾಗಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದಾಗಲೆಲ್ಲಾ ರೈತರಿಗೆ ಕೇವಲ ಭರವಸೆ ನೀಡಿ ಹೋಗುತ್ತಾರಷ್ಟೆ. ಯಾವೊಂದು ಕೆಲಸವು ಅಗುವುದಿಲ್ಲ. ಹೀಗಾಗಿ ಈ ಬಾರಿ ರಾಜ್ಯದ ರೈತರ, ಕಾರ್ಮಿಕರ, ಬಡವರ ನೋವನ್ನು ಪ್ರಧಾನಿಗೆ ಗಮನಕ್ಕೆ ತಲುಪಿಸಬೇಕೆಂಬ ಉದ್ದೇಶದಿಂದ ತಲೆ ಬೋಳಿಸಿಕೊಂಡು ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದೇವೆಂದು ಸಂಘದ ಅಧ್ಯಕ್ಷ ಲಕ್ಷ್ಮಣ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News