ಜ.4: ಪೇಜಾವರಶ್ರೀಗೆ ನುಡಿನಮನ

Update: 2020-01-02 17:25 GMT

ಉಡುಪಿ, ಜ.2: ಉಡುಪಿ ಬಳಕೆದಾರರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ವತಿಯಿಂದ ಇತ್ತೀಚೆಗೆ ನಿಧನರಾದ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥರಿಗೆ ಶೃದ್ಧಾಂಜಲಿ ಹಾಗೂ ನುಡಿನಮನ ಸಲ್ಲಿಸುವ ಕಾರ್ಯಕ್ರಮ ಜ.4ರ ಶನಿವಾರ ಸಂಜೆ 4:00ಗಂಟೆಗೆ ನಾರ್ತ್ ಶಾಲೆಯ ಆವರಣದಲ್ಲಿರುವ ಬಳಕೆದಾರರ ವೇದಿಕೆಯ ಕಚೇರಿಯಲ್ಲಿ ನಡೆಯಲಿದೆ.

ಮಂಗಳೂರಿನ ಪ್ರದೀಪ್ ಕುಮಾರ್ ಕಲ್ಕೂರ ಅವರು ಇದರಲ್ಲಿ ಭಾಗವಹಿಸಲಿದ್ದು, ಉಡುಪಿಯ ನಾಗರಿಕರು ಇದರಲ್ಲಿ ಭಾಗವಹಿಸುವಂತೆ ಬಳಕೆದಾರರ ವೇದಿಕೆ ಸಂಚಾಲಕರಾದ ಕೆ.ದಾಮೋದರ ಐತಾಳ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News