×
Ad

ದಂಪತಿ ನಡುವಿನ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ

Update: 2020-01-03 20:36 IST

ಶಿವಮೊಗ್ಗ, ಜ. 3: ದಂಪತಿಯ ನಡುವಿನ ಕಲಹ, ಪತ್ನಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಗ್ರಾಮದಲ್ಲಿ ನಡೆದಿದೆ. 

ರುಕ್ಮಿಣಿ ಬಾಯಿ (45) ಕೊಲೆಯಾದ ಪತ್ನಿ ಎಂದು ಗುರುತಿಸಲಾಗಿದೆ. ಪತಿ ಆನಂದನಾಯ್ಕ ಆರೋಪಿತ ಪತಿಯಾಗಿದ್ದಾನೆ. ಘಟನೆಯ ನಂತರ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕೌಟಂಬಿಕ ವಿಚಾರಗಳಿಗೆ ಸಂಬಂಧಿಸಿದಂತೆ ದಂಪತಿ ನಡುವೆ ಕಲಹ ಏರ್ಪಟ್ಟಿದೆ. ಇದು ವಿಕೋಪಕ್ಕೆ ತಿರುಗಿದೆ. ಕೋಪದಲ್ಲಿ ಪತಿಯು, ಪತ್ನಿಯ ಹತ್ಯೆ ನಡೆಸಿದ್ದಾನೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News