ವೇಷ ಧರಿಸಿ ಕಳ್ಳತನಕ್ಕೆ ಯತ್ನ ಆರೋಪ: ಸಾರ್ವಜನಿಕರಿಂದ ಥಳಿತ
Update: 2020-01-04 18:24 GMT
ಮೈಸೂರು,ಜ.4: ವೇಷ ಧರಿಸಿ ಕಳ್ಳತನ ಮಾಡಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ರೆಡ್ ಹ್ಯಾಂಡಾಗಿ ಹಿಡಿದು ಸ್ಥಳೀಯರು ಥಳಿಸಿದ ಘಟನೆ ನಡೆದಿದೆ.
ಭದ್ರಾವತಿಯ ನಿವಾಸಿ ಎಂದು ಹೇಳಿಕೊಂಡಿರುವ ಪ್ರವೀಣ್ ಕಳ್ಳತನ ಯತ್ನ ಆರೋಪಿ. ಮೈಸೂರಿನ ರಾಮಾನುಜ ರಸ್ತೆಯಲ್ಲಿ ಘಟನೆ ನಡೆದಿದ್ದು, ದೇವಾಲಯಕ್ಕೆ ಡೊನೇಷನ್ ಕೊಡುವ ನೆಪದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ. ಮನೆಗೆ ಬಂದು ನಂಬಿಸುತ್ತಿದ್ದ ಈತ, ಪಂಚೆ, ಶೆಲ್ಯ ತುಳಸಿ ಹಾರ ಧರಿಸಿ ಬಂದು ಬ್ರಾಹ್ಮಣರ ಮನೆಗಳಲ್ಲಿ ಉಳಿದುಕೊಳ್ಳುತ್ತಿದ್ದ ಎನ್ನಲಾಗಿದೆ.
ನಂತರ ಮನೆಯವರನ್ನ ನಂಬಿಸಿ ಮನೆಯಲ್ಲೆ ಕಳ್ಳತನ ಮಾಡುತ್ತಿದ್ದ. ಇಂದು ಕಳ್ಳತನ ಮಾಡುವ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಸ್ಥಳೀಯರು ಥಳಿಸಿದ್ದಾರೆ ಎಂದು ತಿಳಿದುಬಂದಿದೆ.
ಮಠದ ಅರ್ಚಕ ವ್ಯಾಸಾತೀರ್ಥಾಚಾರ್ಯ ಮನೆಯಲ್ಲಿ ಕಳ್ಳತನ ಮಾಡುವಾಗ ಪ್ರವೀಣ್ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.