ಜ. 6 : ಹಳೆಯಂಗಡಿಯಲ್ಲಿ ಪೌರತ್ವ ತಿದ್ದುಪಡಿ ವಿರುದ್ಧ ಪ್ರತಿಭಟಣೆ

Update: 2020-01-05 08:14 GMT

ಹಳೆಯಂಗಡಿ : ಮುಸ್ಲಿಂ ಒಕ್ಕೂಟ ಹಳೆಯಂಗಡಿ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜ.6ರ ಸಂಜೆ 4 ಗಂಟೆಗೆ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಪ್ರತಿಭಟನಾಸಭೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಮಾನ ಮನಸ್ಕ ವಿವಿಧ ಸಂಘಟನೆಗಳ ಮುಖಂಡರು, ಜಾತ್ಯತೀತ ರಾಜಕೀಯ ಪಕ್ಷದ  ಮುಖಂಡರು, ಸಮಾನ ಮನಸ್ಕ ನಾಗರಿಕರು ಸಾಮಾಜಿಕ, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಇಕ್ಬಾಲ್ ಬೆಳ್ಳಾರೆ, ಇಬ್ರಾಹಿಂ ಬಾತಿಷ ಕೊಡ್ಲಿಪೇಟೆ, ಅಶ್ರಫ್ ಅಮ್ಜದಿ ಹಾಗೂ ಸುನಿಲ್ ಕುಮಾರ್ ಬಜಾಲ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News