ಕೆ ಆರ್ ಎಸ್ ಪರಿಸರದಲ್ಲಿ ಗಣಿಗಾರಿಕೆ ಸ್ಥಗಿತೊಳಿಸಲು ಮುಖ್ಯಮಂತ್ರಿ ಸೂಚನೆ
Update: 2020-01-05 22:23 IST
ಬೆಂಗಳೂರು, ಜ.5: ಕೃಷ್ಣರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗದಂತೆ ಈ ಪರಿಸರದಲ್ಲಿ ಕೂಡಲೇ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ಸಲ್ಲಿಸುವಂತೆ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿದರು.