ಮುಳ್ಳೇರಿಯಾ: ಬೈಕ್- ಕಾರು ನಡುವೆ ಅಪಘಾತ; ದಂಪತಿ ಮೃತ್ಯು

Update: 2020-01-06 07:27 GMT

ಕಾಸರಗೋಡು, ಜ.6: ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಪೂರ್ವಾಹ್ನ 11 ಗಂಟೆ ಸುಮಾರಿಗೆ ಮುಳ್ಳೇರಿಯಾ ಸಮೀಪದ ಕಾರಡ್ಕದಲ್ಲಿ ನಡೆದಿದೆ.

ಮೃತಪಟ್ಟವರನ್ನು ಗೋವಿಂದ ರಾಜ್( 53) ಮತ್ತು ಪತ್ನಿ ಉಮಾವತಿ ( 42 ) ಎಂದು ಗುರುತಿಸಲಾಗಿದೆ.

ಗೋವಿಂದರಾಜ್ ಮತ್ತು ಪತ್ನಿ ಸಂಚರಿಸುತ್ತಿದ್ದ ಬೈಕಿಗೆ ಎದುರಿನಿಂದ ಅತೀ ವೇಗದಿಂದ ಬಂದ ಕಾರು ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕನ್ನು ಮೀಟರ್ ಗಳಷ್ಟು ದೂರ ಕಾರು ಎಳೆದೊಯ್ದಿದೆ. ಇದರಿಂದ ಗಂಭೀರ ಗಾಯಗೊಂಡ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಆದೂರು ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ತೆಗೆದುಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮೃತಪಟ್ಟ ದಂಪತಿ ಮೂಲತಃ ತಮಿಳುನಾಡು ನಿವಾಸಿಗಳಾಗಿದ್ದು, ಕಾರಡ್ಕದಲ್ಲಿ ವಾಸವಾಗಿದ್ದರು. ಗೋವಿಂದರಾಜ್ ಮುಳ್ಳೇರಿಯದಲ್ಲಿ ಸೆಲೂನ್ ಅಂಗಡಿ ನಡೆಸುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News