ಸುರತ್ಕಲ್: ಆಶ್ರಯ ಹಕ್ಕು ಪತ್ರ ವಿತರಣೆ

Update: 2020-01-06 16:47 GMT

ಸುರತ್ಕಲ್, ಜ.6: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 32 ಮಂದಿಗೆ ಆಶ್ರಯ ಹಕ್ಕುಪತ್ರಗಳನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ಸೋಮವಾರ ಸುರತ್ಕಲ್ನ ವಿಶ್ವಕರ್ಮ ಸಭಾಭವನದಲ್ಲಿ ವಿತರಿಸಿದರು. ಇದರೊಂದಿಗೆ ನಾಲ್ಕು ಮಂದಿಗೆ ಪಿಂಚಣಿ ಪತ್ರವನ್ನು ಶಾಸಕರು ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಅವರು ಸರಕಾರ ಬಡಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದೆ. ಯಾವುದೇ ಜಾತಿ, ಧರ್ಮ ಎಂದು ನೋಡದೆ ಮನುಷ್ಯತ್ವದ ಆಧಾರದ ಮೇಲೆ ಎಲ್ಲರಿಗೂ ಸಹಾಯ ಮಾಡುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಸಂಧ್ಯಾಸುರಕ್ಷೆ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಸಹಿತ ಯಾವುದೇ ಯೋಜನೆಗಳು ಸಮರ್ಪಕವಾಗಿ ಜನರನ್ನು ತಲುಪುವ ಕೆಲಸಗಳು ನಡೆಯುತ್ತಿವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News