ಕಾರ್ಯಕ್ರಮದಲ್ಲಿ ಪ್ರಜ್ಞೆ ತಪ್ಪಿದ ಉತ್ತರ ಕನ್ನಡ ಜಿಲ್ಲಾಧಿಕಾರಿ

Update: 2020-01-09 15:03 GMT

ಕಾರವಾರ: ನಗರದ ವಾರ್ತಾ ಇಲಾಖೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಅವರಿಗೆ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಘಟನೆ ನಡೆಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ವಾರ್ತಾ ಭವನದಲ್ಲಿ 'ವಾರ್ತಾ ಸ್ಪಂದನ' ಫೋನ್ ಇನ್ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದ ಉದ್ಘಾಟನೆಗೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಬಂದಿದ್ದರು‌. ಸಭಾ ಕಾರ್ಯಕ್ರಮ ಆರಂಭಗೊಂಡ ಕೆಲವೇ ನಿಮಿಷದಲ್ಲಿ, ವೇದಿಕೆಯಲ್ಲಿ ಕುಳಿತಿದ್ದ ಜಿಲ್ಲಾಧಿಕಾರಿ ಪ್ರಜ್ಞೆ ತಪ್ಪಿದರು.

ಈ ವೇಳೆ ಮಾಧ್ಯಮದವರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಅಧಿಕಾರಿಗಳು ಸ್ಥಳದಲ್ಲಿದ್ದರು. ತಕ್ಷಣವೇ ಜಿಲ್ಲಾಧಿಕಾರಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿದರು. ಕೆಲವು ನಿಮಿಷಗಳ ಬಳಿಕ ಅವರು ಚೇತರಿಸಿಕೊಂಡರು.

ಕಾರ್ಯಕ್ರಮಕ್ಕೆ ಅಡ್ಡಿಯಾಗಬಾರದು ಎಂದು ಕಾರ್ಯಕ್ರಮ ಉದ್ಘಾಟಿಸಿದ ಅವರು, ನಂತರ ಕ್ಷಮೆ ಕೋರಿ ಆಸ್ಪತ್ರೆಗೆ ತೆರಳಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News