ಮಡಿಕೇರಿ: ಕೆಎಸ್‍ಆರ್‍ಟಿಸಿ- ಬೈಕ್ ನಡುವೆ ಅಪಘಾತ; ಇಬ್ಬರು ಮೃತ್ಯು

Update: 2020-01-11 14:13 GMT

ಮಡಿಕೇರಿ, ಜ.11: ಕೆಎಸ್‍ಆರ್‍ಟಿಸಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಸ್ನೇಹಿತರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ಕೊಯಿನಾಡು ಸಮೀಪದ ದೇವರಕೊಲ್ಲಿಯಲ್ಲಿ ನಡೆದಿದೆ.

ರಾಜಸ್ಥಾನ ಮೂಲದ ಹರ್ನಾಬ್ (30) ಹಾಗೂ ಪಶ್ಚಿಮ ಬಂಗಾಳ ಮೂಲದ ನವೀನ್ (29) ಮೃತರು. ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದ ಮೂವರಲ್ಲಿ ಇಬ್ಬರು ಒಂದು ಬೈಕ್‍ನಲ್ಲಿ, ಮತ್ತೊಬ್ಬ ಮತ್ತೊಂದು ಬೈಕ್‍ನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ ಇಬ್ಬರು ಸ್ನೇಹಿತರಿದ್ದ ಬೈಕ್ ಬಸ್‍ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ದೇವರಕೊಲ್ಲಿ ತಿರುವಿನಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಹಾಗೂ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News