ಅಡ್ವೆ-ನಂದಿಕೂರು ಕಂಬಳಕ್ಕೆ ಚಾಲನೆ

Update: 2020-01-11 17:53 GMT

ಪಡುಬಿದ್ರಿ: ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಅಡ್ವೆ ನಂದಿಕೂರಿನಲ್ಲಿ ನಡೆದ 28 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಕಂಬಳಾಭಿಮಾನಿ ಬೈಲೂರು ಮುದ್ದಣ್ಣ ಎಸ್ಟೇಟ್‍ನ ದಿ. ರೋಹಿತ್ ಎಂ ಶೆಟ್ಟಿ  ಸ್ಮರಣಾರ್ಥ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಕನೆ ಹಲಗೆ, ಅಡ್ಡ ಹಲಗೆ, ನೇಗಿಲು ಕಿರಿಯ ಮತ್ತು ಹಿರಿಯ, ಹಗ್ಗ ಕಿರಿಯ ಮತ್ತು ಹಿರಿಯ ವಿಭಾಗಗಳಲ್ಲಿ ನೂರಾರು ಜೊತೆ ಕೋಣಗಳು ಸ್ಫರ್ಧೆಯಲ್ಲಿ ಪಾಲ್ಗೊಂಡಿದ್ದವು. ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಧ್ವರಾಯ ಭಟ್ ಶನಿವಾರ ಚಾಲನೆ ನೀಡಿ ಶುಭ ಹಾರೈಸಿದರು.

ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೈ.ಪ್ರಪುಲ್ಲ ಶೆಟ್ಟಿ. ಅಡ್ವೆ ಮಹಾಗಣಪತಿ ದೇವಸ್ಥಾನದ ಜೆನ್ನಿ ರವಿಶಂಕರ ಭಟ್, ವೆಂಕಟೇಶ ಭಟ್, ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಸುಂದರ ಯು ಸುವರ್ಣ, ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಸಂಚಾಲಕ ಪ್ರೊ.ಕೆ.ಗುಣಪಾಲ ಕಡಂಬ, ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾದ ಅಡ್ವೆ ಮೂಡ್ರಗುತ್ತು ಚಿತ್ತರಂಜನ್ ಶೆಟ್ಟಿ, ಅಡ್ವೆ ಕಂಕಣಗುತ್ತು ಹರೀಶ್ ಶೆಟ್ಟಿ, ಅಡ್ವೆ ಮೂಡ್ರಗುತ್ತು, ಕಾರ್ಯಾಧ್ಯಕ್ಷರಾದ ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನವೀನಚಂದ್ರ ಸುವರ್ಣ ಅಡ್ವೆ, ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ ಬೆಜ್ಜಬೆಟ್ಟು, ಶಶಿಕುಮಾರ ಶೆಟ್ಟಿ ಸಾಂತೂರು ಬಾಲ್ಕಟ್ಟ ಮನೆ, ಕಾರ್ಯದರ್ಶಿಗಳಾದ ಶಶಿಧರ ಹೆಗ್ಡೆ ಅಡ್ವೆ, ಉದಯ ರೈ ಅರಂತಡೆ, ಕೃಸ್ನ ಕುಮಾರ್ ಶೆಟ್ಟಿ ಸನ್ನೋಣಿ, ಕೋಶಾಧಿಕಾರಿಗಳಾದ ಲಕ್ಷ್ಮಣ್ ಶೆಟ್ಟಿವಾಲ್ ಅರಂತಡೆ, ಗಣೇಶ್ ಶೆಟ್ಟಿ ಸಾಂತೂರು, ಅಮರನಾಥ ಶೆಟ್ಟಿ ಅಣ್ಣಾಜಿಗೋಳಿ, ಗಣೇಶ್‍ರಾಜ್ ಶೆಟ್ಟಿ ಅಡ್ವೆ, ಪ್ರಕಾಶ್ ಶೆಟ್ಟಿ ಮಾಗಂದಡಿ, ರವೀಂದ್ರ ಪ್ರಭು ಸಾಂತೂರು, ಪ್ರವೀಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News