ಸಿಎಎ-ಎನ್‌ಆರ್‌ಸಿ ವಿರುದ್ಧ ಧ್ವನಿಯೆತ್ತಿದ ಮಂಗಳೂರಿನ ಮಹಿಳೆಯರು

Update: 2020-01-11 17:55 GMT

ಸಿಎಎ-ಎನ್‌ಆರ್‌ಸಿ ವಿರುದ್ಧ ಮಂಗಳೂರಿನಲ್ಲಿ ಸಾವಿರಾರು ಮಹಿಳೆಯರಿಂದ ನಗರದ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂದೆ ಶನಿವಾರ ಪ್ರತಿಭಟನೆ ನಡೆಯಿತು. ಸಿಎಎ-ಎನ್‌ಆರ್‌ಸಿ ವಿರುದ್ಧ ಮಂಗಳೂರಿನಲ್ಲಿ ಮಹಿಳೆಯರು ಇಷ್ಟೊಂದು ಸಂಖ್ಯೆಯಲ್ಲಿ ಬೀದಿಗಿಳಿದಿರುವುದು ಇದೇ ಮೊದಲಾಗಿದೆ. ಪ್ರತಿಭಟನೆಯಲ್ಲಿ ಕವಯಿತ್ರಿ, ಲೇಖಕಿ ಜ್ಯೋತಿ ಗುರುಪ್ರಸಾದ್, ನಜ್ಮಾ ನಝೀರ್ ಚಿಕ್ಕನೇರಳೆ, ಗೋಲಿಬಾರ್‌ಗೆ ಬಲಿಯಾದ ಬಂದರ್ ಕಂದಕ್‌ನ ಅಬ್ದುಲ್ ಜಲೀಲ್‌ರ ಸಂಬಂಧಿ ಸಕೀನಾ ಮೊದಲಾದವರು ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor