ಮಾರಕಾಸ್ತ್ರಗಳಿಂದ ದಾಳಿ ಕೊಲೆ ಪ್ರಕರಣ: ಇಬ್ಬರ ಬಂಧನ

Update: 2020-01-11 18:33 GMT

ಬೆಂಗಳೂರು, ಜ.11: ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಇಲ್ಲಿನ ಬಸವೇಶ್ವರ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ಯೋಗೇಶ್ ಕುಮಾರ್(35), ಪ್ರಸನ್ನಕುಮಾರ್(39) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಡಿ.14ರಂದು ಆರೋಪಿಗಳಾದ ಯೋಗೇಶ್ ಹಾಗೂ ಪ್ರಸನ್ನ, ಇಲ್ಲಿನ ಮಂಜುನಾಥ್ ನಗರದ ಬಾಲಾಜಿ ಮದ್ಯದಂಗಡಿ ಬಳಿ ನಿಂತಿದ್ದ ತಮ್ಮ ಸ್ನೇಹಿತ ಸದಾನಂದನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದರು ಎನ್ನಲಾಗಿದೆ.

ಕೊಲೆ ಪ್ರಕರಣ ದಾಖಲಿಸಿಕೊಂಡ ಬಸವೇಶ್ವರ ನಗರ ಠಾಣಾ ಪೊಲೀಸರು, ಆರೋಪಿಗಳನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News