ಸಾಲಬಾಧೆ: ರೈತ ಆತ್ಮಹತ್ಯೆ
Update: 2020-01-12 17:45 GMT
ಕಲಬುರ್ಗಿ, ಜ.12: ಸಾಲಬಾಧೆ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಇಲ್ಲಿನ ಗೊಬ್ಬರವಾಡಿ ಗ್ರಾಮದ ಬಸವರಾಜ ನರೂಣಿ (40) ಮೃತ ರೈತ ಎಂದು ತಿಳಿದುಬಂದಿದೆ.
ರೈತ ಬಸವರಾಜ ನರೂಣಿ ಕೃಷಿ ಚಟುವಟಿಕೆಗಾಗಿ ಮಾಡಿದ ಸಾಲದ ಮೊತ್ತ ಮರುಪಾವತಿಸಲು ಸಾಧ್ಯವಾಗದೆ ಮಾನಸಿಕವಾಗಿ ಕುಗ್ಗಿದ್ದ. ರವಿವಾರ ಮುಂಜಾನೆ ತನ್ನ ಜಮೀನಿನಲ್ಲಿ ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.