ಅಕ್ರಮ ಮದ್ಯ ಮಾರಾಟ: ಓರ್ವನ ಸೆರೆ

Update: 2020-01-13 16:37 GMT

ಶಂಕರನಾರಾಯಣ, ಜ.13: ಅಲ್ಬಾಡಿ ಗ್ರಾಮದ ಮೈಲುಕಲ್ಲು ಎಂಬಲ್ಲಿ ಡಿ.12ರಂದು ಅಪರಾಹ್ನ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಆರ್ಡಿ ಗಂಟುಬೀಳು ಗುಣಕರ ನಾಯ್ಕ(37) ಬಂಧಿತ ಆರೋಪಿ. ಈತನಿಂದ ಒಟ್ಟು 2312ರೂ. ಮೌಲ್ಯದ ಮದ್ಯ ಹಾಗೂ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News