ಅಡ್ಯಾರ್ ಕಣ್ಣೂರು ಪ್ರತಿಭಟನಾ ಸಭೆ ಯಶಸ್ವಿ ಗೊಳಿಸಲು ಎಸ್.ವೈ.ಎಸ್ ಕರೆ

Update: 2020-01-13 16:54 GMT

ಮಂಗಳೂರು : ಸಿಎಎ, ಎನ್.ಆರ್.ಸಿ ಕಾಯ್ದೆ ವಿರುದ್ಧ ದ.ಕ.,ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿ ಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಜ. 15 ರಂದು  ಅಡ್ಯಾರ್ ಶಹಾ ಮೈದಾನದಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಮಾವೇಶವನ್ನು ಯಶಸ್ವಿ ಗೊಳಸಲು ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಕರೆ ನೀಡಿದೆ.

ಎಸ್ ವೈ ಎಸ್ ನ‌ ಎಲ್ಲ ಘಟಕಗಳಿಂದ ವಿಶೇಷ ವಾಹನಗಳನ್ನು ವ್ಯವಸ್ಥೆ ಗೊಳಿಸಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡು ಸಮ್ಮೇಳನವನ್ನು ಐತಿಹಾಸಿಕ ಗೊಳಿಸಬೇಕು ಹಾಗೂ  ಗರಿಷ್ಠ ಮಟ್ಟದಲ್ಲಿ ಇದನ್ನು ಪ್ರಚಾರ ಮಾಡಬೇಕೆಂದು ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಜಿ.ಎಂ.ಕಾಮಿಲ್ ಸಖಾಫಿ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News