ಹಲವು ಮೇರು ನಟರಿಗೆ ಬಣ್ಣ ಹಚ್ಚಿದ್ದ ಮೇಕಪ್ ಕೃಷ್ಣ ಇನ್ನಿಲ್ಲ

Update: 2020-01-13 16:56 GMT

ಬೆಂಗಳೂರು, ಜ.13: ಡಾ.ರಾಜ್‌ಕುಮಾರ್ ಸೇರಿ ಹಲವು ಮೇರು ನಟರಿಗೆ ಬಣ್ಣ ಹಚ್ಚಿದ್ದ ಮೇಕಪ್ ಕೃಷ್ಣ (55) ನಿಧನ ಹೊಂದಿದ್ದಾರೆ.

ಅನಾರೋಗ್ಯ ಸಮಸ್ಯೆಯಿಂದ ಹಲವು ದಿನಗಳಿಂದ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಸೋಮವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆ ಉಸಿರೆಳೆದಿದ್ದಾರೆ. ಅವರ ಹುಟ್ಟೂರಾದ ಕುಂಬಳಗೋಡು ಬಳಿಯ ಗೊಲ್ಲಹಳ್ಳಿಯಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಯಿತು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಕನ್ನಡದ ಸುಮಾರು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪ್ರಸಾದನ ಕಲಾವಿದರಾಗಿ ದುಡಿದಿದ್ದರು. ಬಾಲಿವುಡ್ ನಟರಿಗೂ ಅವರು ಮೇಕಪ್ ಮಾಡಿದ್ದರು. ರಾಜ್ ಕುಟುಂಬದೊಂದಿಗೆ ಹೆಚ್ಚು ಸಂಪರ್ಕ ಇಟ್ಟುಕೊಂಡಿದ್ದ ಕೃಷ್ಣ, ರಾಜ್‌ಕುಮಾರ್ ಅವರ ಮಕ್ಕಳಿಗೂ ಹಲವು ಚಿತ್ರಗಳಲ್ಲಿ ಪ್ರಸಾದನ ಕಲಾವಿದನಾಗಿ ಕೆಲಸ ನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News