​ತಮಿಳುನಾಡು ಪೊಲೀಸ್ ಅಧಿಕಾರಿಯ ಹತ್ಯೆ ಪ್ರಕರಣ: ಉಡುಪಿಯಲ್ಲಿ ಇಬ್ಬರು ಪೊಲೀಸ್ ವಶಕ್ಕೆ ?

Update: 2020-01-14 08:42 GMT

ಉಡುಪಿ, ಜ.14: ಇಂದ್ರಾಳಿ ರೈಲು ನಿಲ್ದಾಣದಲ್ಲಿ ಇಬ್ಬರನ್ನು ಇಂದು ಬೆಳಗ್ಗೆ ರಾಜ್ಯ ಪೊಲೀಸರು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ವಶಕ್ಕೆ ಪಡೆದಿದ್ದಾರೆ. ಇವರನ್ನು ಕಳೆದ ವಾರ ತಮಿಳುನಾಡಿನಲ್ಲಿ ನಡೆದ ಪೊಲೀಸ್ ಅಧಿಕಾರಿಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಗಿನ ಜಾವ 6 ಗಂಟೆ ಸುಮಾರಿಗೆ ಇಂದ್ರಾಳಿ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂನಲ್ಲಿ ನಿಂತಿದ್ದ ಇಬ್ಬರನ್ನು ಯುವಕರನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆನ್ನಲಾಗಿದೆ. ಜ.8ರಂದು ತಮಿಳುನಾಡು ರಾಜ್ಯದ ಪೊಲೀಸ್ ಅಧಿಕಾರಿಯೊಬ್ಬರನ್ನು ಶೂಟೌಟ್ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಈ ಕಾರ್ಯಾಚರಣೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಖಚಿತ ಮಾಹಿತಿಯಂತೆ ಸೋಮವಾರ ರಾತ್ರಿಯೇ ನಿಲ್ದಾಣದಲ್ಲಿ ಬಿಡು ಬಿಟ್ಟ ಪೊಲೀಸರು, ಇಂದು ಬೆಳಗಿವ ಜಾವ ಆರು ಗಂಟೆಗೆ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವುದಾಗಿ ರೈಲ್ವೆ ಪೊಲೀಸರು ಖಚಿತ ಪಡಿಸಿದ್ದಾರೆ. ಇವರು ಯಾವ ರೈಲಿನಲ್ಲಿ ಬಂದು ಇಳಿದು, ಯಾವ ರೈಲಿಗಾಗಿ ಕಾಯುತ್ತಿದ್ದರೆಂಬ ಮಾಹಿತಿ ಈವರೆಗೆ ದೊರೆತಿಲ್ಲ. ಅದೇ ರೀತಿ ಆರೋಪಿಗಳ ಕುರಿತ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News