ಜ.15ರ ಅಡ್ಯಾರ್ ಕಣ್ಣೂರು ಪ್ರತಿಭಟನೆ ಯಶಸ್ಸಿಗೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಕರೆ

Update: 2020-01-14 11:21 GMT

ಮಂಗಳೂರು, ಜ.14: ‘ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ 'ದಿ ಮುಸ್ಲಿಂ ಸೆಂಟ್ರಲ್ ಕಮಿಟಿ' ನೇತೃತ್ವದಲ್ಲಿ ಜ.15ರಂದು ಅಡ್ಯಾರ್ ಕಣ್ಣೂರಿನ ನಡೆಯುವ ಪ್ರತಿಭಟನೆಯನ್ನು ಯಶಸ್ಸಿಗೊಳಿಸಲು ಭಾರತದ ಗ್ರ್ಯಾಂಡ್ ಮುಫ್ತಿ ಶೈಖುನಾ ಎಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಕರೆ ನೀಡಿದ್ದಾರೆ.

ಇದು ಕೇವಲ ಮುಸ್ಲಿಮರ ಸಮಸ್ಯೆಯಲ್ಲ. ದೇಶದ ಪ್ರತಿಯೊಬ್ಬ ಪ್ರಜೆಯೂ ಎದುರಿಸುವ ಸಮಸ್ಯೆಯಾಗಿದೆ. ಈಗಾಗಲೆ ದೇಶಾದ್ಯಂತ ವಿವಿಧೆಡೆ ದಿನನಿತ್ಯ ಪ್ರತಿಭಟನೆಗಳು ನಡೆಯುತ್ತಾ ಇವೆ. ಅದರಂತೆ ಜ.15ರಂದು ಅಡ್ಯಾರ್ ಕಣ್ಣೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಮುಸ್ಲಿಮರು ತಮ್ಮೆಲ್ಲಾ ಆಶಯಗಳನ್ನು ಮರೆತು ಸಮಾವೇಶವನ್ನು ಯಶಸ್ಸಿಗೊಳಿಸಬೇಕು ಮತ್ತು ನಾಡಿನ ಅಹಿಂದ ವರ್ಗ ಕೂಡ ಜಾತಿ, ಮತ, ಬೇಧವಿಲ್ಲದೆ ಈ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಮನವಿ ಮಾಡಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News