ಜ.15ರ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಿ: ಐವನ್ ಡಿಸೋಜ
Update: 2020-01-14 12:26 GMT
ಮಂಗಳೂರು, ಜ.14: ಕೇಂದ್ರ ಸರಕಾರದ ಜನ ವಿರೋಧಿ ಕಾಯ್ದೆ ಎನ್ಆರ್ಸಿ, ಸಿಎಎ ಹಾಗೂ ಎನ್ಪಿಆರ್ ವಿರೋಧಿಸಿ ಮಂಗಳೂರು ಮುಸ್ಲಿಂ ಸೆಂಟ್ರಲ್ ಕಮಿಟಿ ದ.ಕ. ಮತ್ತು ಉಡುಪಿ ಜಿಲ್ಲೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಅಡ್ಯಾರ್ ಕಣ್ಣೂರು ಮಸೀದಿ ಮುಂಭಾಗ ಶಹಾ ಗಾರ್ಡನ್ ಮೈದಾನದಲ್ಲಿ ಜ.15ರಂದು ಮಧ್ಯಾಹ್ನ 2:30ಕ್ಕೆ ಬೃಹತ್ ಜನ ಜಾಗೃತಿ ಸಮಾವೇಶ ನಡೆಯಲಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.