ಜ.15ರ ಅಡ್ಯಾರ್ ಕಣ್ಣೂರು ಪ್ರತಿಭಟನೆ ಯಶಸ್ಸಿಗೆ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಕರೆ

Update: 2020-01-14 12:35 GMT

ಮಂಗಳೂರು: ಸಿಎಎ-ಎನ್‌ಆರ್‌ಸಿ ವಿರೋಧಿಸಿ ದ.ಕ ಮತ್ತು ಉಡುಪಿ ಸೆಂಟ್ರಲ್ ಕಮಿಟಿ ಹಾಗೂ ಸಮಾನ ಮನಸ್ಕ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜನವರಿ 15 ರಂದು ಅಪರಾಹ್ನ 2 ಗಂಟೆಗೆ ಮಂಗಳೂರಿನ ಅಡ್ಯಾರ್ ನ ಶಾಹ್ ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಮಾವೇಶವನ್ನು ಯಶಸ್ವಿಗೊಳಿಸಲು ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತರಾಷ್ಟ್ರೀಯ ಸಮಿತಿ ಕರೆ ನೀಡಿದೆ. 

ಊರಿನಲ್ಲಿರುವ ಎಲ್ಲಾ ಕೆಸಿಎಫ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಕೆಸಿಎಫ್ ಐ.ಎನ್.ಸಿ ಅಧ್ಯಕ್ಷ ಹಾಜಿ ಶೈಖ್ ಬಾವಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News