ನಿರ್ಭಯಾ ಪ್ರಕರಣ: ಮುಖೇಶ್ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ದಿಲ್ಲಿ ಸರಕಾರ

Update: 2020-01-16 16:27 GMT

ಹೊಸದಿಲ್ಲಿ, ಜ. 16: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ದೋಷಿ ಮುಖೇಶ್‌ನ ಕ್ಷಮಾದಾನ ಅರ್ಜಿಯನ್ನು ಅರವಿಂದ ಕೇಜ್ರಿವಾಲ್ ನೇತೃತ್ವದ ದಿಲ್ಲಿ ಸರಕಾರ ಗುರುವಾರ ತಿರಸ್ಕರಿಸಿದೆ. ಈ ಕ್ಷಮಾದಾನ ಅರ್ಜಿಯನ್ನು ಲೆಫ್ಟಿನೆಂಟ್ ಗವರ್ನರ್ ಅವರಿಗೆ ರವಾನಿಸಲಾಗಿತ್ತು. ಅಲ್ಲಿಂದ ಈಗ ಅದನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಕಳುಹಿಸಿ ಕೊಡಲಾಗಿದೆ. ದೇಶದ ರಾಜಧಾನಿಯಲ್ಲಿ ಡಿಸೆಂಬರ್ 16-17ರಂದು ಚಲಿಸುತ್ತಿರುವ ಬಸ್‌ನಲ್ಲಿ 23 ವರ್ಷದ ಯುವತಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ದೋಷಿಗಳೆಂದು ಪರಿಗಣಿಸಲಾಗಿತ್ತು ಹಾಗೂ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News