ಕೊಳ್ಳೇಗಾಲ: ದ್ವಿಚಕ್ರ ವಾಹನ ಕಳ್ಳತನ; ಆರೋಪಿಯ ಬಂಧನ

Update: 2020-01-16 17:18 GMT

ಕೊಳ್ಳೇಗಾಲ,ಜ.15: ದ್ವಿಚಕ್ರ ವಾಹನ ಕದ್ದು ಸಾಗಾಣೆ ಮಾಡುತ್ತಿದ್ದ ವೇಳೆ ಯುವಕನೋರ್ವ ಬೈಕ್ ಸಮೇತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಗ್ರಾಮಾಂತರ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೆಚ್.ಡಿ.ತಾಲ್ಲೂಕಿನ ಬಡಗಲಪುರ ಗ್ರಾಮದ ಜಯರಾಮು ಅಲಿಯಾಸ್ ನಿಖಿಲ್ ಎಂಬಾತ ಬಂಧಿತ ಆರೋಪಿ.

ಈತನು ಚಿಕ್ಕಲ್ಲೂರು ಜಾತ್ರೆಯಲ್ಲಿ ದೇವಾಲಯದ ಮುಂಭಾಗದಲ್ಲಿದ್ದ ದ್ವಿಚಕ್ರ ವಾಹನ ಸುಜಕಿ ಆಕ್ಸಸ್(ಕೆ.ಎ.55 ಇಎ 4360)  ಕಳ್ಳತನ ಮಾಡಿ ಮಾರಾಟ ಮಾಡಲು ಮೈಸೂರು ಕಡೆಗೆ ಹೋಗುತ್ತಿದ್ದ ವೇಳೆಯಲ್ಲಿ ಮಧುವನಹಳ್ಳಿ ಜಂಕ್ಷನ್ ಬಳಿ ಗಸ್ತಿನಲ್ಲಿದ್ದ ಪೊಲೀಸರನ್ನು ಕಂಡು ಸ್ಕೂಟರ್ ನ್ನು ಒಡೆಯರಪಾಳ್ಯದ ಕಡೆಗೆ ತಿರುಗಿಸಿದಾಗ ಅನುಮಾನಗೊಂಡ ಪೊಲೀಸರು ಬೈಕ್ ಸಮೇತ ಆತನನ್ನು ಹಿಡಿದು ಠಾಣೆಗೆ ಕರೆದು ವಿಚಾರಿಸಿದಾಗ ವಾಹನ ಕಳ್ಳತನ ಎಸಗಿರುವುದಾಗಿ ತಪ್ಪೊಪ್ಪಿಕೊಂಡನು.

ಬಳಿಕ ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಹಾಜರುಪಡಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News