ತೆಂಕನಿಡಿಯೂರು: ಎಂ.ಎ.ಯಲ್ಲಿ 2 ಪ್ರಥಮ ರ್ಯಾಂಕ್
Update: 2020-01-17 16:27 GMT
ಉಡುಪಿ, ಜ.17: 2019 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಕೇಶ್ ಆರ್. ಅಮೀನ್ ಎಂ.ಎ. ಅರ್ಥಶಾಸ್ತ್ರ ಹಾಗೂ ರಶ್ಮಿತಾ ವೈ. ಎಂ.ಎ. ಸಮಾಜಶಾಸ್ತ್ರ ವಿಭಾಗಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ರಘುಪತಿ ಟ್, ಪ್ರಾಂಶುಪಾಲರು, ವಿಬಾಗಗಳ ಮುಖ್ಯಸ್ಥರು, ಅಧ್ಯಾಪಕರು ಕಾಲೇಜು ಅಭಿವೃದ್ಧಿ ಮಿತಿಯ ಸದಸ್ಯರು ಅಭಿನಂದಿಸಿದ್ದಾರೆ. ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ರಘುಪತಿಟ್, ಪ್ರಾಂಶುಪಾಲರು, ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಅಭಿನಂದಿಸಿದ್ದಾರೆ.