ಅಂಚೆ ಕಚೇರಿಯಲ್ಲಿ ಆಧಾರ್ ನೊಂದಣಿ, ತಿದ್ದುಪಡಿ ಸೌಲಭ್ಯ

Update: 2020-01-17 17:07 GMT

ಉಡುಪಿ, ಜ.17: ಭಾರತೀಯ ಅಂಚೆ ಇಲಾಖೆಯ ಉಡುಪಿ ಅಂಚೆ ವಿಭಾಗವು ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಸಾರ್ವಜನಿಕರ ಅನುಕೂಲ ಕ್ಕಾಗಿ, ಉಡುಪಿ ಪರ್ಯಾಯ ಮಹೋತ್ಸವದ ಪ್ರಯುಕ್ತ ಆಧಾರ ನೊಂದಣಿ ಮತ್ತು ತಿದ್ದುಪಡಿಯ ಜೊತೆಗೆ ಅಂಚೆ ಯೋಜನೆಗಳಾದ ಸುಕನ್ಯ ಸಮೃದ್ಧಿ ಯೋಜನೆ (ಎಸ್‌ಎಸ್‌ಎ), ಸಾರ್ವಜನಿಕ ವಿಷ್ಯ ನಿಧಿ (ಪಿಪಿಎಫ್), ಸಣ್ಣ ಉಳಿತಾಯ ಖಾತೆ ಯೋಜನೆಗಳು, ಅಂಚೆ ಜೀವವಿಮೆ (ಪಿಎಲ್‌ಐ) ಮತ್ತು ಗ್ರಾಮೀಣ ಅಂಚೆ ಜೀವವಿಮೆ (ಆರ್‌ಪಿಎಲ್‌ಐ), ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ), ಅಂಚೆ ಸಂಗ್ರಹಣಾ ಖಾತೆಗಳನ್ನು ತೆರೆಯಲು ವಿಶೇಷ ಕೌಂಟರ್‌ಗಳನ್ನು ಜ.18ರಂದು ಬೆಳಗ್ಗೆ 9ರಿಂದ ಸಂಜೆ 6 ರವರೆಗೆ ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ತೆರೆಯಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪೋಸ್ಟ್ ಮಾಸ್ಟರ್, ಉಡುಪಿ ಪ್ರಧಾನ ಅಂಚೆ ಕಚೇರಿ ಯನ್ನು ಸಂಪರ್ಕಿಸುವಂತೆ ಉಡುಪಿ ವಿಬಾಗದ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News