ಪರ್ಯಾಯ ಪೂರೈಸಿದ ಪಲಿಮಾರು ಶ್ರೀಗೆ ಸಾರ್ವಜನಿಕ ಅಭಿನಂದನೆ
ಉಡುಪಿ, ಜ.17: ಪರ್ಯಾಯ ಅದಮಾರು ಮಠ ಶ್ರೀಕೃಷ್ಣ ಸೇವಾ ಬಳಗದ ವತಿಯಿಂದ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಪರ್ಯಾಯವನ್ನು ಪೂರೈಸಿದ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರಿಗೆ ಶುಕ್ರವಾರ ಸಾರ್ವಜನಿಕವಾಗಿ ಅಭಿನಂದಿಸಲಾಯಿತು.
ರಥಬೀದಿಯ ಶ್ರೀಪೂರ್ಣಪ್ರಜ್ಞ ಮಂಟಪದಲ್ಲಿ ಪರ್ಯಾಯ ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ, ಸೇವಾ ಬಳಗದ ಅಧ್ಯಕ್ಷರಾಗಿ ರುವ ಶಾಸಕ ಕೆ.ರಘುಪತಿ ಭಟ್ ಸೇರಿದಂತೆ ಪದಾಧಿಕಾರಿಗಳ ಜೊತೆಗೂಡಿ ಪಲಿಮಾರು ಸ್ವಾಮೀಜಿಯನ್ನು ಸನ್ಮಾನಿಸಿದರು.
ಪಲಿಮಾರು ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿದರು. ವಿದ್ವಾನ್ ಡಾ.ಸತ್ಯನಾರಾಯಣ ಆಚಾರ್ಯ ಅಭಿನಂದನಾ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾಧಿಕಾರಿ ಜಗದೀಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ, ತಾಪಂ ಅಧ್ಯಕ್ಷೆ ನೀತಾ ಗುರುರಾಜ್, ಪೌರಾಯುಕ್ತ ಆನಂದ ಕಲ್ಲೋಳಿಕರ್ ಮೊದಲಾದವರು ಉಪಸ್ಥಿತರಿದ್ದರು