ಪೊಲೀಸ್ ಪೇದೆ ಮೇಲೆ ಹಲ್ಲೆ: ಆರೋಪ

Update: 2020-01-18 18:46 GMT

ಬೆಂಗಳೂರು, ಜ.18: ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಮಡಿವಾಳ ಸಂಚಾರ ಪೊಲೀಸ್ ಠಾಣೆಯ ಪೇದೆ ಜಗದೀಶ್ ಎಂಬುವರು, ಜ.14ರಂದು ಇಲ್ಲಿನ ಬೋಮ್ಮನಹಳ್ಳಿ ಸಿಗ್ನಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ, ರಸ್ತೆ ಪಕ್ಕ ನಿಂತಿದ್ದ ಆಟೊ ರೀಕ್ಷಾಗಳನ್ನು ತೆರವುಗೊಳಿಸಲು ಮುಂದಾಗಿದ್ದ ವೇಳೆ, ಅಪರಿಚಿತ ವ್ಯಕ್ತಿಗಳು ಕಲ್ಲು ತೂರಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಘಟನೆ ಸಂಬಂಧ ಪೇದೆ ಜಗದೀಶ್ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News