ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ

Update: 2020-01-19 14:21 GMT

ಬೆಂಗಳೂರು, ಜ.19: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನೊರ್ವನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಬಾಗಲೂರಿನ ಕಾಡುಸಣ್ಣಪನಹಳ್ಳಿ ಬಳಿ ನಡೆದಿದೆ ಎಂದು ವರದಿಯಾಗಿದೆ.

ಶಿವಾಜಿನಗರ ಜ್ಯುವೆಲರಿ ಬಡಾವಣೆಯ ಅಬ್ದುಲ್ ಮೊಹ್ಸಿನ್ (26) ಕೊಲೆಯಾದ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.

ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಮೊಹ್ಸಿನ್‌ನನ್ನು ಕಾರಿನಲ್ಲಿ ಶಿವಾಜಿನಗರದಿಂದ ರಾತ್ರಿ ಕರೆದುಕೊಂಡು ಹೋದ ನಾಲ್ಕೈದು ಮಂದಿ ಕಾಡುಸಣ್ಣಪನಹಳ್ಳಿಯ ನಿರ್ಜನ ಪ್ರದೇಶವೊಂದರಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ರಿಝ್ವನ್ ಮತ್ತು ಆತನ ಸ್ನೇಹಿತರು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮೊಕದ್ದಮೆ ದಾಖಲು ಮಾಡಿಕೊಂಡಿರುವ ಶಿವಾಜಿನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News