‘ವಂದೇ ಮಾತರಂ’ ಹಾಡದವರಿಗೆ ಭಾರತದಲ್ಲಿ ಬದುಕಲು ಹಕ್ಕಿಲ್ಲ: ಕೇಂದ್ರ ಸಚಿವ ಸಾರಂಗಿ
Update: 2020-01-19 14:49 GMT
ಗಾಂಧೀನಗರ, ಜ.19: ದೇಶಕ್ಕೆ ಬೆಂಕಿ ಹಚ್ಚಿದವರು ದೇಶಪ್ರೇಮಿಗಳಲ್ಲ. ಭಾರತದ ಸ್ವಾತಂತ್ರ, ಏಕತೆ, ವಂದೇ ಮಾತರಂ ಒಪ್ಪದವರಿಗೆ ಭಾರತದಲ್ಲಿ ಬದುಕಲು ಹಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿದ್ದಾರೆ.
ದೇಶ ವಿಭಜನೆಯಿಂದ ಆಗಿರುವ ತಪ್ಪನ್ನು ಸರಿಪಡಿಸಲು ಪೌರತ್ವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇದು 70 ವರ್ಷದ ಹಿಂದೆಯೇ ಜಾರಿಯಾಗಬೇಕಿತ್ತು. ನಮ್ಮ ಪೂರ್ವಜರು, ಆಯ್ದ ಕೆಲವು ಮುಖಂಡರು ಮಾಡಿದ್ದ ತಪ್ಪನ್ನು ಈಗ ಸರಿಪಡಿಸಲಾಗಿದೆ. ಕಾಂಗ್ರೆಸ್ ಮಾಡಿರುವ ತಪ್ಪಿನ ಫಲವನ್ನು ನಾವೀಗ ಅನುಭವಿಸುತ್ತಿದ್ದೇವೆ ಎಂದವರು ಹೇಳಿದ್ದಾರೆ.
ಈಗ ಈ ಕಾಯ್ದೆಯನ್ನು ಜಾರಿ ಮಾಡುವ ಮೂಲಕ ತಪ್ಪನ್ನು ಸರಿಪಡಿಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ನಾವು ಅಭಿನಂದಿಸಬೇಕು ಎಂದು ಪ್ರತಾಪ್ ಸಾರಂಗಿ ಹೇಳಿದ್ದಾರೆ. ಗುಜರಾತ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.