ಸಿಎಎ, ಎನ್ಆರ್ಸಿ ವಿರೋಧಿಸಿ ವಿದ್ಯಾರ್ಥಿಗಳಿಂದ ಚಿತ್ರ ಪ್ರದರ್ಶನ
Update: 2020-01-19 14:56 GMT
ಕಲಬುರಗಿ, ಜ.19: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಹಾಗೂ ಎನ್ಆರ್ಸಿ ವಿರೋಧಿಸಿ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಿದ್ಯಾರ್ಥಿಗಳಿಂದ ಚಿತ್ರ ಪ್ರದರ್ಶನ ಆಯೋಜಿಸಲಾಗಿತ್ತು.
ಈ ಚಿತ್ರ ಪ್ರದರ್ಶನದಲ್ಲಿ ಮುಸ್ಲಿಮ್ ಸಮುದಾಯದ ತ್ಯಾಗ ಬಲಿದಾನ ಮತ್ತು ವಿವಿಧ ಕ್ಷೇತ್ರದ ಸಾಧನೆ ಮಾಡಿ ದೇಶದ ಕೀರ್ತಿ ಹೆಚ್ಚಿಸಿದ ನಾಯಕರು ಮತ್ತು ಪೌರತ್ವ ಕಾನೂನು ವಿರೋಧಿಸಿದ ನಾಯಕರ ಬರಹಗಳು, ಸಂವಿಧಾನ, ಭಾರತ, ಟಿಪ್ಪು ಸುಲ್ತಾನ್, ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಹಾಗೂ ಜಾಮಿಯ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಭಿತ್ತಿ ಚಿತ್ರಗಳು ಸಾರ್ವಜನಿಕರ ಗಮನ ಸೆಳೆಯಿತು.
ವಿದ್ಯಾರ್ಥಿಗಳು ಸಿಎಎ, ಎನ್ಆರ್ಸಿ ಕಾಯ್ದೆಯನ್ನು ವಿರೋಧಿಸಿ ಕವಿತೆ, ಕವನ, ದೇಶ ಭಕ್ತಿಗೀತೆ ಸೇರಿದಂತೆ ವಿವಿಧ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು.