ಬಿಜೆಪಿಯಲ್ಲಿ ಭಿನ್ನಾಭಿಪ್ರಾಯದಿಂದ ಸಂಪುಟ ವಿಸ್ತರಣೆ ವಿಳಂಬ: ಎಚ್.ವಿಶ್ವನಾಥ್

Update: 2020-01-19 17:18 GMT

ಬಿಜೆಪಿಯಲ್ಲಿ ಭಿನ್ನಾಭಿಪ್ರಾಯದಿಂದ ಸಂಪುಟ ವಿಸ್ತರಣೆ ವಿಳಂಬ: ಎಚ್.ವಿಶ್ವನಾಥ್

ಮೈಸೂರು,ಜ.19: ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ. ಇದರಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ.

ರವಿವಾರ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕು ದೊಡ್ಡಕೊಪ್ಪಲು ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆಗಾಗಿ ಸಹಾಯ ಮಾಡಿದ 17 ಜನರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಉಪಚುನಾವಣೆಯಲ್ಲಿ ಗೆದ್ದಿರುವ ಹಾಗೂ ಸೋತಿರುವ ಬಿಜೆಪಿಯ 17 ಮಂದಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂಬ ನಂಬಿಕೆ ಹೈಕಮಾಂಡ್, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದೆ. ಒಂದು ವೇಳೆ ಅದು ಬದಲಾದರೆ ಮುಂದೆ ಕಾದು ನೋಡುತ್ತೇವೆ ಎಂದು ಬಿಜೆಪಿಗೆ ಪರೋಕ್ಷ ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News